Skip to main content

Posts

Showing posts with the label Dosa

ಬಿಳಿ ಬಣ್ಣದ ವ್ಯಾಮೋಹ ನಮ್ಮ ಆಹಾರದಲ್ಲಿನ ಪೌಷ್ಠಿಕಾಂಶ ಕೊರತೆಗೆ ಕಾರಣ ಆಗಿದೆ.

#ಕಪ್ಪು_ಉದ್ದಿನಕಾಳು_ಬಳಕೆ_ಕಡಿಮೆ_ಏಕೆ?     ದೋಸೆ,ಇಡ್ಲಿ, ವಡೆ ಮತ್ತು ಹಪ್ಪಳಕ್ಕೆ ಉದ್ದಿನಕಾಳು ಬೇಕೇ ಬೇಕು ಮೊದಲೆಲ್ಲ ಗ್ರಾಮೀಣ ಪ್ರದೇಶದಲ್ಲಿ ರೈತ ಕುಟುಂಬಗಳು ಭೂಮಿ ಫಲವತ್ತೆಗಾಗಿ ಉದ್ದು ಬಿತ್ತುತ್ತಿದ್ದರು ಅದನ್ನೇ ಬಳಸುತ್ತಿದ್ದರು ಆದರೆ ಈಗ ಭೂಮಿ ಫಲವತ್ತತೆಗೆ ಕೆಮಿಕಲ್ ಪಟಿ೯ಲೈಸರ್ ಇರುವುದರಿಂದ ಪುರಾತನವಾದ ಸಾಂಪ್ರದಾಯಿಕ ಸಾವಯವ ಮಾದರಿ ಯಾರಿಗೂ ಬೇಕಾಗಿಲ್ಲ.     ಅದೇ ರೀತಿ ಕಪ್ಪು ಉದ್ದಿನ ಕಾಳು ಬಳಸಿ ಮಾಡಿದ ಇಡ್ಲಿ ದೋಸೆಗಿಂತ ಪಾಲೀಶ್ ಆದ ಉದ್ದಿನಬೇಳೆಯಲ್ಲಿ ಮಾಡಿದ್ದು ಅಚ್ಚ ಬಿಳಿ ಆಗುವುದರಿಂದ ಕ್ರಮೇಣ ಕಪ್ಪು ಉದ್ದಿನಕಾಳು ಬಳಕೆ ಕಡಿಮೆ ಆಗಿದೆ.    ಹೈ ಪ್ರೋಟೀನ್ ವಾಲ್ಯೂ ಇರುವ , ಕೊಲೆಸ್ಟ್ರಾಲ್ ಕಡಿಮೆ ಮಾಡುವ, ಪ್ರೋಟೀನ್ ಯುಕ್ತ, ಕಾಬೊ೯ಹೈಡ್ರೇಡ್ ಹೆಚ್ಚಿರುವ ಏಷ್ಯಾ ಮೂಲದ ಉದ್ದಿನ ಕಾಳು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಳಕೆ ಆಗುತ್ತದೆ.   ತಮಿಳುನಾಡು, ಕೋಸ್ಟಲ್ ಆಂಧ್ರದಲ್ಲಿ ಇದನ್ನು ಮಳೆಗಾಲದ ಮತ್ತು ಬೇಸಿಗೆಯ ಬೆಳೆಯಾಗಿ ಬೆಳೆಯುತ್ತಾರೆ ಈಗಲೂ ದೇಶದಲ್ಲಿ ಅತಿ ಹೆಚ್ಚು ಉದ್ದು ಬೆಳೆಯುವ ಜಿಲ್ಲೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆ (ಗುಂಟೂರು ಮೆಣಸು ಕೂಡ ಪ್ರಸಿದ್ಧಿ).    ಡಯಾಬಿಟೀಸ್ ಇರುವವರು ಉದ್ದು ಹೆಚ್ಚು ಬಳಸಬಹುದೆಂದು ಆಯುವೇ೯ದದಲ್ಲಿ ಹೇಳುತ್ತಾರೆ.   ಕಪ್ಪು ಉದ್ದು ಬೇಳೆ ಮಾಡಿ ಪಾಲೀಶ್ ಮಾಡಿದ ಉದ್...