Skip to main content

Posts

Showing posts with the label HalavariMutt is branch of Gorakpur Natha samithi

ಹಾಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಅಧ್ಯಕ್ಷರಾಗಿರುವ ಗೋರಕ್ ಪುರದ ನಾಥಪಂತದ ಕೇಂದ್ರ ಅಧ್ಯಕ್ಷರು ಅದರ ಒಂದು ಉಪಶಾಖಾ ಮಠವೇ ಈ ಹಲವಾರಿ ಮಠ, ದೀರ್ಘ ಕಾಲ ಇಲ್ಲಿನ ಪೀಠದಲ್ಲಿದ್ದ ಸೋಮನಾಥ ಪೀರ್ ಬಾವೋಜಿ ಒಂದು ನೆನಪು.

#ಸೋಮನಾಥಪೀರ್_ಬಾವೋಜಿ_ಹಲವಾರಿ_ಮಠಾದೀಶರ_ನೆನಪು##  ಸೋಮನಾಥ ಜೀ ಮೂಲ ಗ್ವಾಲಿಯರ್ (ಮಧ್ಯ ಪ್ರದೇಶ) ಆದರೆ ಅವರ ಜೀವನದ ಬಹುಕಾಲ ಅಂದರೆ 34 ವಷ೯ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಸಿದ್ದಾಪುರ ಸಮೀಪದ ಎಡಮೊಗೆಯಲ್ಲಿ (ಕಮಲಶಿಲೆ ದೇವಾಸ್ಥನಕ್ಕೆ ಸಮೀಪ ) ನಾಥಪಂಥ ಮಠದಲ್ಲಿ ಮಠಾದೀಶರಾಗಿದ್ದರು.   ಶ್ರೀ ಕ್ಷೇತ್ರ ಸಿದ್ದ ಪೀಠ ಕೊಡಚಾದ್ರಿ  ಉತ್ತರ ಪ್ರದೇಶದ ಗೋ ರಕನಾಥಪುರದ ಯೋಗಿ ಆದಿತ್ಯನಾಥರ (ಈಗಿನ ಮುಖ್ಯಮಂತ್ರಿಗಳು) ಅದೀನದಲ್ಲಿದೆ.     ಪ್ರತಿ 12 ವಷ೯ಕ್ಕೆ ಒಮ್ಮೆ ನಾಸಿಕ್ ಕುಂಬ ಮೇಳದ ನಂತರ ಹೊರಡುವ ಬಾರಾ ಪಂಥ ಜೋ೦ಡಿ ಪಾದಯಾತ್ರೆ ಇಲ್ಲಿ ಬಂದು ತಂಗುತ್ತದೆ, ಆಗ ಮಹಾಂತರ ಸಮಿತಿ ಕಳೆದ 12 ವಷ೯ದ ಆಡಳಿತ, ಪೂಜೆ ಇತ್ಯಾದಿ ತಮ್ಮದೆ ಆದ ಮಾನದಂಡದಲ್ಲಿ ಪರಿಶೀಲನೆ ಮಾಡುತ್ತಾರೆ ಆದರಲ್ಲಿ ತ್ರುಪ್ತಿ ಆದರೆ ಹಾಲಿ ಇರುವ ಸ್ವಾಮೀಜಿ ಮುಂದುವರಿಸುತ್ತಾರೆ ಆಗದಿದ್ದರೆ ತಮ್ಮ ಜೊತೆ ಬಂದ ಯೋಗಿ ಒಬ್ಬರನ್ನ ಅಲ್ಲಿಗೆ ನೇಮಿಸಿ ಮೊದಲಿದ್ದವರನ್ನ ತಮ್ಮ ಜೊತೆ ಮಂಗಳೂರಿನ ಕದ್ರಿ ಮಠಕ್ಕೆ ಕರೆದೊಯ್ತಾರೆ.     ಬಹುಶಃ 1978ರಲ್ಲಿ ಬಂದ ಜೋ೦ಡಿಯಾತ್ರೆಯಲ್ಲಿ ಶ್ರೀ ಸೋಮನಾಥಜಿ ಇಲ್ಲಿಗೆ ಬಂದವರು. ನನ್ನ ಅವರ ಸಂಪಕ೯ 1997ರ ನಂತರದ್ದು, ಶಿವಮೊಗ್ಗ ಜಿಲ್ಲೆಯ ಕುಣುಬಿ ಎಂಬ  ಸಣ್ಣ ಗುಡ್ಡಗಾಡು ಜನಾಂಗದ ಸಂಘಟನೆ, ಅಭಿವೃದ್ಧಿಗಾಗಿ ಓಡಾಡುವಾಗ ಅವರಲ್ಲಿ ಇವರ ಬಗ್ಗೆ, ನಾಥಪಂಥತ ಬಗ್ಗೆ ಹೆಚ...