Skip to main content

Posts

Showing posts with the label My first Novel printed and reached my hand today

ನಾನು ಬರೆದ ಮೊದಲ ಕಾದಂಬರಿ ಪುಸ್ತಕವಾಗಿ ಇವತ್ತು ಕೈ ಸೇರಿದೆ

ಕೆಳದಿ ಸಾಮ್ರಾಜ್ಯ ಇತಿಹಾಸ ಮರೆತಿರುವ            ಬೆಸ್ತರರಾಣಿ ಚಂಪಕ (ಕೆಳದಿಯ ಖ್ಯಾತ ರಾಜ ವೆಂಕಟಪ್ಪ ನಾಯಕ ಮತ್ತು ಚಂಪಕಾ ರಾಣಿ ದುರಂತ ಪ್ರೇಮ ಕಥೆ )  ಇದು ಇತಿಹಾಸವನ್ನಾಧರಿಸಿದ ಕಾಲ್ಪನಿಕ          ಕಾದ೦ಬರಿ   ಸುಮಾರು 10 ವರ್ಷದ ಹಿಂದೆ ಮುದ್ರಿಸ ಬೇಕಾದ ಈ ಕಾದಂಬರಿ ಇವತ್ತು ಮಿತ್ರರಾದ ಹಾಯ್ ಬೆಂಗಳೂರು ವರದಿಗಾರ ಮತ್ತು ಶಿವಮೊಗ್ಗದ ಜನ ಹೋರಾಟ ಪತ್ರಿಕೆ ಸಂಪಾದಕರಾದ ಶೃಂಗೇಶ್ ರ ಸಹಕಾರದಿಂದ ಪ್ರಿಂಟ್ ಆಗಿ ರಕ್ಷಾ ಬಂದನದ ದಿನ ನನ್ನ ಕೈ ತಲುಪಿದೆ.   ನನ್ನ ಹಲವು ಅವತಾರ ನೋಡಿರುವ ಅವರದ್ದೇ ಸುಂದರ ಮುನ್ನುಡಿ ಇದೆ.   ಈ ಪುಸ್ತಕ ಆನಂದಪುರದ #ಮುರುಘರಾಜೇಂದ್ರ_ಸ್ವಾಮೀಜಿಗಳಿಗೆ, #ಆನಂದಪುರದ_ಕನ್ನಡ_ಸಂಘಕ್ಕೆ, #ಆನಂದಪುರದ_ಇತಿಹಾಸ_ಉಳಿಸಿ_ಅಭಿಯಾನ_ಸಮಿತಿಗೆ ಮತ್ತು #ಆನಂದಪುರದ_ಈಜು_ಮಿತ್ರರ_ಬಳಗಕ್ಕೆ_ಅಪಿ೯ಸಿದ್ದೇನೆ.   ಇದು ಆನಂದಪುರದ್ದೇ ಇತಿಹಾಸ ಮತ್ತು ಆನಂದಪುರದಲ್ಲೇ ಇರುವ ಚಂಪಕ ರಾಣಿ ಸ್ಮಾರಕದ ಕಥೆ ಆಗಿದೆ.   ಕೆಳದಿಯಿಂದ ಕೇರಳದ ಬೇಕಲ್ ವರೆಗೆ ಕೆಳದಿ ರಾಜ್ಯದ ಆಡಳಿತ, ಅವರ ಅವಧಿಯಲ್ಲಿ ನಿಮಿ೯ಸಿದ ಕೋಟೆ ಕೊತ್ತಳ, ದೇವಾಲಯ ಆ ಕಾಲದ ರೀತಿ ನೀತಿ ರಿವಾಜು, ಕೋಟಿ ಕಟ್ಟಿ ಕೋಟೆ ನಿವ೯ಹಿಸುವ ಕೋಟೆಗಾರ ಸಮಾಜ, ಕೊಡಚಾದ್ರಿಯ ತುದಿಯ ಮೂಲ ಮುಕಾಂಬಿಕೆಯ ಅಚ೯ಕರಾದ ಬಳೆಗಾರರು, ಪ್ರತಿ 12 ...