#2001ರಲ್ಲಿ ಆನಂದಪುರಂ ಕನ್ನಡ ಸಂಘದ ಆವರಣದಲ್ಲಿ ನಾ.ಡಿಸೋಜ ಬಯಲು ರಂಗ ಮಂದಿರ ಉದ್ಘಾಟನೆ ಕಡಿದಾಳು ಶಾಮಣ್ಣರಿಂದ # 1995 ರಿಂದ 2001ರವರೆಗೆ ಆನಂದಪುರಂ ಹೋಬಳಿಯಲ್ಲಿ ರಚನಾತ್ಮಕ ಕಾಯ೯ ನೆರವೇರಿಸುವ ಹುಮ್ಮಸ್ಸು ಮತ್ತು ವಯಸ್ಸು ನನ್ನದಾಗಿತ್ತು ಆಗ ನನ್ನ ವಯಸ್ಸು 30. ಮುರುಘಾಮಠ ಸ.ಪ್ರಾ.ಶಾಲೆ ಆವರಣದಲ್ಲಿ ಕೆ.ವಿ.ಸುಬ್ಬಣ್ಣ ರಂಗಮಂದಿರ, ಆನಂದಪುರಂ ಕಾಲೇಜ್ ಆವರಣದಲ್ಲಿ ಹಾಸ್ಯ ನಟ ಬಾಲಕೃಷ್ಣ ರಂಗಮಂದಿರ, ಯಡೇಹಳ್ಳಿ ಶಾಲಾ ಆವರಣದಲ್ಲಿ ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪ ರಂಗ ಮಂದಿರ ಪ್ರಾರಂಬಿಸಿದ ನಂತರ ಸಾಗರದ ನೆಚ್ಚಿನ ಸಾಹಿತಿ ನಾ.ಡಿಸೋಜ ಬಯಲು ರಂಗಮಂದಿರ ಆನಂದಪುರಂ ನ ಕನ್ನಡ ಸಂಘದ ಆವರಣದಲ್ಲಿ ನಿಮಿ೯ಸಿ ಕಡಿದಾಳು ಶಾಮಣ್ಣರಿಂದ ಉದ್ಘಾಟಿಸಿದ್ದು ಈ ಸಮಾರಂಭದಲ್ಲಿ ನಾ.ಡಿಸೋಜರು ಖುದ್ದಾಗಿ ಭಾಗವಹಿಸಿದ್ದರು. ಆ ದಿನ ಶಿವಮೊಗ್ಗದ ಜಾಷದಿ ಸಸ್ಯಗಳ ತಜ್ಞ ವೆಂಕಟಗಿರಿಯರನ್ನ ಸನ್ಮಾನಿಸಿದ್ದು ಕೂಡ. ಎಲ್ಲರೂ ನನ್ನ ಮನೆಯಲ್ಲಿ ಚಹಾ ಕುಡಿದು ಕಾಯ೯ಕ್ರಮಕ್ಕೆ ಹೋಗಿದ್ದೆವು. ಕಡಿದಾಳು ಶಾಮಣ್ಣ ನಾ.ಡಿಸೋಜ ರಂಗಮ೦ದಿರ ಉದ್ಘಾಟಿಸಿ ದೇವಾಲಯಕ್ಕೆ ಮುಂಚೆ ಟಾಯಿಲೆಟ್ ನಿಮಾ೯ಣ ಆಗಬೇಕೆಂದು 2001ರಲ್ಲೇ ಸ್ವಚ್ಚ ಭಾರತ ಪ್ರತಿಪಾದಿಸಿದರೆ ನಾ.ಡಿ.ನನ್ನ ಹೆಸರಲ್ಲಿ ರಂಗ ಮಂದಿರ ನನ್ನ ಜೀವನದ ಅವಿಸ್ಮರಣಿಯ ದಿನ ಎಂದರು, ನಂತರ ಅವರು ಅತ್ಯಂತ ಮೇಲ್ಮಟ್ಟದ ಸ್ಥಾನ ಪಡೆದಿದ್ದಾರೆ. ಅವತ್ತು ಆನಂದಪುರದ ಕನ್...