Skip to main content

Posts

Showing posts with the label PARTICIPATION WITH MAGSESSE AWARD WINNER K.V.SUBBANNA.

ಮ್ಯಾಗ್ಸಸೈ ಪ್ರಶಸ್ತಿ ವಿಜೇತ ಕೆ.ವಿ.ಸುಬ್ಬಣ್ಣರೊಡನೆ.

ಹೆಗೋಡಿನ ನಿನಾಸಂ ಸಂಸ್ಥೆ ನಾಟಕ ಮತ್ತು ಸಿನಿಮಾ ಜನರಿಗೆ ಹೇಗೆ ಚಿರಪರಿಚಿತ ಹಾಗೆ ಇದರ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ತಮ್ಮ ವಿಚಾರ ಮತ್ತು ಬರವಣಿಗೆಯಿಂದ ವಿಶ್ವವಿಖ್ಯಾತರು, ಅಂತರಾಷ್ಟ್ರೀಯ ಮ್ಯಾಗ್‌ ಸೆಸೆ ಪ್ರಶಸ್ತಿ ವಿಜೇತರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಣ್ಣ ಹಳ್ಳಿ ಹೆಗೋಡುನವರು ನಮ್ಮ ತಾಲ್ಲೂಕಿನವರು ಅಂತ ನಮಗೆಲ್ಲ ಹೆಮ್ಮೆ.      ಒಮ್ಮೆ ನೀನಾಸಂ ಸಭಾ0ಗಣದಲ್ಲಿ ಸುಬ್ಬಣ್ಣನವರ ಜೊತೆ ಸಭೆ ಒಂದರಲ್ಲಿ ಅತಿಥಿಯಾಗಿ ಭಾಗವಹಿಸಿದ್ದೆ, ದೇವಾಡಿಗ ಜಾತಿಯ (ವೀರಪ್ಪ ಮೊಯ್ಲ್ ) ಜಾತಿ ಸಮಾವೇಶವದು, ಸಂಘಟಕರು ನನ್ನನ್ನ ಕರೆದಾಗ ನನಗೆ ನಂಬಲಿಕ್ಕೆ ಆಗಲಿಲ್ಲ, ಸಣ್ಣ ಜಾತಿ ಸಮಾವೇಶಕ್ಕೆ ಸುಬ್ಬಣ್ಣ ಬರುವುದು ಅನುಮಾನ ಅಂದೆ. ಇಲ್ಲ ಒಪ್ಪಿದಾರೆ ಸಬಾo ಗಣ ಉಚಿತವಾಗಿ ನೀಡಿದಾರೆ ಅಂದರು.       ಅವತ್ತಿನ ಸಭೆಯಲ್ಲಿ ಸುಬ್ಬಣ್ಣರ ಬಾಷಣ ಸಣ್ಣ ಜಾತಿಯ ಶೂದ್ರರಿಗೆ ಒ೦ದು ಆಶಾದಾಯಕ ನೀತಿ ಪಾಠವಾಗಿತ್ತು, ಸಮಾಜವಾದದ ಅನುಯಾಯಿ ಆಗಿದ್ದ ಸುಬ್ಬಣ್ಣ ಲೋಹಿಯ ವಿಚಾರಧಾರೆ ಹೊಂದಿದವರು ಹಾಗಾಗಿ ಅವರ ಮಾತನ್ನ ಗಮನವಿಟ್ಟು ಆಲೈಸುತ್ತಿದ್ದೆ..........      " ದೇಶದಲ್ಲಿ ಮೇಲ್ಜಾತಿಗಳು ಸಂಘಟನೆಗಳು ಅವಶ್ಯವಿಲ್ಲ ಅದರಿಂದ ಸಮಾಜಕ್ಕೆ ಮಾರಕ ಆದರೆ ಅಸಂಘಟಿತ ಸಣ್ಣ ಸಣ್ಣ ಜಾತಿಗಳು ತಮ್ಮ ಹಕ್ಕು ಮತ್ತು ಸವಲತ್ತುಗಳಿಗಾಗಿ ಸಂಘಟಿತರಾಗಬೇಕು " ಎಂಬ ಮಾತು ಸ್ವತಃ ಬ್ರಾಹಮಣರಾದ ಹಾಗೂ ...