Skip to main content

Posts

Showing posts with the label R.T.Vittalmurthy wrotes on my small stories book BILALI BILLI ABYANJANA

Blog number 1062. ನನ್ನ ಸಣ್ಣ ಕಥೆಗಳ ಕಥಾ ಸಂಕಲನ ಬಿಲಾಲಿ ಬಿಲ್ಲಿ ಅಭ್ಯಂಜನದ ಮುನ್ನುಡಿ ಬರೆದ ಖ್ಯಾತ ಪತ್ರಕರ್ತ ಆರ್ಟಿ. ವಿಠಲಮೂರ್ತಿ.

ಭಟ್ಟರ ಬೋಂಡಾದ ಬಾಂಡ್ಲಿಯಲ್ಲಿ  ಬಿಲಾಲಿ ಬಿಲ್ಲಿಯ ಅಭ್ಯಂಜನ        ಇಲ್ಲಿನ ಎಲ್ಲ ಕತೆಗಳ ಒಳ ಹೊಕ್ಕರೆ,ಅವುಗಳ ಮೈ ತಡವುತ್ತಿದ್ದರೆ,ಅವುಗಳ ಎದೆಬಡಿತವನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ.  ಇದು ಕಥಾನಾಯಕನ ಕತೆ. ಇತ್ತೀಚಿನ ದಿನಗಳಲ್ಲಿ ತಮ್ಮ ಬರಹಗಳ ಮೂಲಕ ನಾಡಿನ ಗಮನ ಸೆಳೆಯುತ್ತಿರುವ ಅರುಣ್ ಪ್ರಸಾದ್ ಅವರ ಈ ಕಥಾಸಂಕಲನ ನನ್ನನ್ನು ಬಿಟ್ಟು ಬಿಡದಂತೆ ಕಾಡಿದ್ದು ಅದರಲ್ಲಿನ ಜೀವನ ಪ್ರೀತಿಗಾಗಿ. ಇಲ್ಲಿರುವ ಕತೆಗಳಲ್ಲಿ ಸಾಮಾನ್ಯ ಜನರೇ ನಾಯಕರು.ಅವರ ಪ್ರೀತಿ,ಮೋಸ,ವಂಚನೆ,ತಂಟೆ,ತಕರಾರು,ಅಮಾಯಕತೆಯ ರೂಪಗಳನ್ನು ಅರುಣ್ ಪ್ರಸಾದ್ ಎಷ್ಟು ಆಪ್ತವಾಗಿ ಹೇಳುತ್ತಾರೆಂದರೆ,ಆ ಕತೆಗಳಲ್ಲಿ ನಾವೂ ಒಂದು ಪಾತ್ರವಾಗಿ ಬೆರೆತು ಹೋಗಿ ಹೋಗಿ ಬಿಡುತ್ತೇವೆ. ಚುನಾವಣೆ ಮತ್ತು ರಮ್ಜಾದಳ ಟಿವಿ ಕತೆಯಲ್ಲಿ ಗಂಡನಿಲ್ಲದ ಹೆಣ್ಣಿನ ಬದುಕು ಎಷ್ಟು ಕಷ್ಟಕರ ಎಂದು ಹೇಳುತ್ತಲೇ ವಿಧವೆ ರಮ್ಜಾದಳ ಖಾಸಗಿ ಬದುಕಿನ ಕತೆ ಪಡೆಯುವ ತಿರುವುಗಳು ನಿಬ್ಬೆರಗು ಮೂಡಿಸುತ್ತವೆ. ರಮ್ಜಾದ್ ಮತ್ತು ಡ್ರೈವರ್ ನಡುವಿನ ಖಾಸಗಿ ಘಟನೆಯೊಂದು ಆಚಾರಿಯ ಬಾಯಲ್ಲಿ ಡಬಲ್  ಮೀನಿಂಗ್ ಪದಗಳಾಗಿ ಹೊರಹೊಮ್ಮುವುದು,ಕೆರಳಿದ ರಮ್ಜಾದ್ ಅತನಿಗೆ ಬಾರಿಸುವುದು ಊರ ಮಧ್ಯೆ ಏನೇನೋ ರೂಪ ಪಡೆದು ಕಾಂಗ್ರೆಸ್-ಬಿಜೆಪಿಯ ಮಧ್ಯೆ ನಡೆದ ಗಲಾಟೆ ಎಂಬಂತೆ ಬಣ್ಣನೆಯಾಗುತ್ತಾ,ಊರ ಜನರ ಬಾಯಿಗೆ ತಾಂಬೂಲವಾಗುತ್ತದೆ. ಆ ಊರಲ್ಲೊಂದು ಶಾಂತಿ ಸಭೆ ಕತೆಯಲ್ಲಿ ಬ...