Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ
# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು. ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ. 11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ. ಈ ಕೆರೆ ಈಗಲೂ ಸೂ...