Skip to main content

Posts

Showing posts with the label one perticular community calling GANJI devotees of tree Goddess and with certain condition they were cutting trees

# ಆ ಕಾಲದಲ್ಲಿ ಮರ ಕಡಿಯಲು ನಿಧಿ೯ಷ್ಟ ಜನರಿದ್ದರು ಅವರಿಗೆ ನಿಯಮಗಳಿದ್ದವು ಅವರು ವನದೇವಿ ಆರಾದಕರು ಅವರೇ ಗಂಜಿಯವರು#

#ಗಂಜಿಯವರು# ಮರ ಮಟ್ಟುಗಳನ್ನ ಕಾಡಿನಿ೦ದ ಕಡಿದು ಉಪಯೋಗಕ್ಕೆ ಬೇಕಾದ ಆಕಾರರಕ್ಕೆ ಕೊಯ್ಯುವ ಕೆಲಸ ಮಾಡುವವರಿಗೆ ಗಂಜಿಯವರು ಎನ್ನುತ್ತಾರೆ ಅವರೆಲ್ಲರ ಹೆಸರಿನ ಮುಂದೆ ಗಂಜಿ ಬರುತ್ತದೆ ಉದಾಹರಣೆಗೆ ಅವರಲ್ಲಿ ಗಣಪ ಎಂಬ ಹೆಸರಿದ್ದರೆ ಅವರು ಗಂಜಿ ಗಣಪ ಅಂತ.      ಇವರು ವನದೇವಿಯ ಭಕ್ತರು, ಬೇಕಾದ ಸೂಕ್ತ ಮರ ಆಯ್ಕೆ ಮಾಡಿದ ಮೇಲೆ ಸುತ್ತ ಮುತ್ತ ಯಾವುದೇ ದೇವಾಲಯವಿದ್ದರೆ ಆ ಮರ ಕಡಿಯುವುದಿಲ್ಲ, ಶಕುನಗಳನ್ನ ಹೆಚ್ಚು ನಂಬುತ್ತಾರೆ, ಎಲ್ಲವೂ ಸರಿಯಾದ ಮರ ಆಯ್ಕೆ ಮಾಡಿದ ಮೇಲೆ ಯಾರಿಗೆ ಆ ಮರ ಬಳಕೆ ಆಗುತ್ತದೆ ಆ ಮನೆಯ ಯಜಮಾನನಿOದ ಮೊದಲ ಕೊಡಲಿ ಕಚ್ಚು ಹಾಕಿಸುತ್ತಾರೆ ಯಾಕೆಂದರೆ ಆ ಮರದಲ್ಲಿ ಯಾವುದೇ ಅಗೋಚರ ಶಕ್ತಿ ಇದ್ದರೆ ಗಂಜಿಯವರಿಗೆ ಬಾಧಿಸದಿರಲಿ ಎಂದು ಮರ ಕಡಿದ ಪಾಪ ತಮಗೆ ತಟ್ಟಬಾರದು ಎಂಬುದು ಅವರ ಉದ್ದೇಶ.   ಬೇಕಾಬಿಟ್ಟ ಕಾಡು ಕಡಿಯುವವರು ಇವರಲ್ಲ, ನೂರು ಮರ ಇದ್ದರೆ ಅದರಲ್ಲಿ ಒಂದು ಮರ ಮಾತ್ರ ಇವರ ಆಯ್ಕೆ.   ಇವರುಗಳು ಪಶ್ಚಿಮ ಘಟ್ಟ ಮತ್ತು ಕರಾವಳಿ ಅಂಚಿನ ಬೈಂದೂರು, ಭಟ್ಕಳ, ಗೇರುಸೊಪ್ಪೆ, ಕುಮಟಾದಲ್ಲಿ ಹೆಚ್ಚಾಗಿ ಇದ್ದಾರೆ.   ಇದೇ ರೀತಿ ಕಾಸರಗೋಡು, ಕುಂಬಳೆ, ಬೇಕಲ್ ನ ಮಲೆಯಾಳಿ ಮರ ಕೊಯ್ಯುವವರಿದ್ದಾರೆ ಆದರೆ ಅವರಿಗೆ ಗಂಜಿಯವರ೦ತೆ ನಿಯಮ ಇಲ್ಲ.   ಇದು ನಾನು ಬರೆದು ಪ್ರಕಟನೆ ಹಂತದಲ್ಲಿ ರುವ ಕೆಳದಿ ರಾಣಿ ಚOಪಕಾ ಕಾದ೦ಬರಿಯಲ್ಲಿ ಆ ಕಾಲದಲ್ಲಿ ಮಲೆನಾಡಿನಲ್ಲಿ ಮನೆ ಕಟ್ಟುವವರಿಗೆ...